ಡಿ.ಸಿ. ಪಾಟೀಲ್ಗೆ ರೈತ ಸೇನೆ ಇಂದು ಸನ್ಮಾನ
ಕೆಂಭಾವಿ: ಕೆಂಭಾವಿ ಪಟ್ಟಣ ದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಜಿಲ್ಲಾ ಮಟ್ಟದ
ಉತ್ತಮ ವರದಿಗಾರ ಪ್ರಶಸ್ತಿ ಪುರಸ್ಕೃತರಾದ ಕೆಂಭಾವಿ ಪ ಟ್ಟಣದ ಯುವ ಪತ್ರಕರ್ತ ಡಿ.ಸಿ. ಪಾಟೀಲ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸ ನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ದೇವೇಂದ್ರಪ್ಪ ದೊರೆ, ಶರಣಪ್ಪ ಪೂಜಾರಿ, ರೈತ ಸೇನೆಯ ಪದಾಧಿಕಾರಿಗಳು ಸೇರಿದಂತೆ ಇತರರಿದ್ದರು.