ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ದಾಡಗಿ ಕ್ರಾಸ್ ಬಳಿ ಜಗಜ್ಯೋತಿ ಬಸವೇಶ್ವರ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿ ಗಳನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು ಎಂದು ಶಹಾಪುರ ರ ತಾಲೂಕು ಅಖಂಡ ಕರ್ನಾಟಕವೀರಶೈವ-ಲಿಂಗಾಯತ ಸಮಾಜದ ತಾಲೂಕ್ ಸಂಘಟನಾ ಕಾರ್ಯದರ್ಶಿ ಶಹಾಪುರ ಶಂಕರಗೌಡ ಏವೂರ ಅವರು ಹೇಳಿದರು. ಕೆಲವು ಕಿಡಿಗೇಡಿಗಳು ಬಸವೇಶ್ವರ ಕೈ ಮುರಿದು ಅವಮಾನಿಸಿದರಲ್ಲದೆ ಧ್ವಜದ ಕಂಬ ಕಿತ್ತೆಸೆಯಲು ಮುಂದಾಗಿದ್ದು ಈಗಾಗಲೇ ಭಾಲ್ಕಿ ತಾಲೂಕಿನ ಆ ಗ್ರಾಮದ ಗ್ರಾಮಸ್ಥರು ಹಾಗೂ ವೀರಶೈವ ಸಮಾಜದ ಮುಖಂಡರು, ಯುವಕರು,ಬಸವ ಅನುಯಾಯಿಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದ್ದಾರೆ ಕೂಡಲೇ ಕಿಡಿಗೇಡಿಗಳನ್ನು ಶೀಘ್ರದಲ್ಲಿಯೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಿ ಅವರನ್ನು ರಾಜ್ಯದಿಂದಲೇ ಗಡಿಪಾರು ಮಾಡಬೇಕು ಒಂದು ವೇಳೆ ಆರೋಪಿಗಳನ್ನು ಬಂದಿಸದಿದ್ದಲ್ಲಿ ತಾಲೂಕು ವೀರಶೈವ-ಲಿಂಗಾಯತ ಸಮಾಜ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.