*ಹೊಸಕೋಟೆ ತಾಲ್ಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು ಇಂಧನ ಸಚಿವರಲ್ಲಿ ಸಚಿವ ಮುನಿಯಪ್ಪ ಮನವಿ*

YDL NEWS
1 Min Read

ಬೆಂ.ಗ್ರಾ ಜಿಲ್ಲೆ ಮೇ 23:- ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು ಮಾನ್ಯ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರಿಗೆ ಮನವಿ ಸಲ್ಲಿಸಿದರು.

 

ಹೊಸಕೋಟೆ ನಗರದಲ್ಲಿ 400/200 ಕೆ.ವಿ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ, ದೇವನಗುಂದಿ ಕೈಗಾರಿಕಾ ಪ್ರದೇಶದಲ್ಲಿ 220 ಕೆ.ವಿ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ, ತಾತನೂರು, ಬಾನಹಳ್ಳಿ, ತಮ್ಮರಸನಹಳ್ಳಿ, ಎಂ ಸತ್ಯವಾರ, ಅಟ್ಟೂರಿನಲ್ಲಿ 66 ಕೆ.ವಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು ಮನವಿ ಪತ್ರ ಸಲ್ಲಿಸಿದರು.

 

ಈ ಸಂದರ್ಭದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ(ಕೆಪಿಟಿಸಿಎಲ್)ಪಂಕಜ್ ಕುಮಾರ್ ಪಾಂಡೆ, ಬೆಂಗಳೂರು ವಿದ್ಯುತ್ ಪ್ರಸರಣ ನಿಗಮದ(ಬೆಸ್ಕಾಂ)ವ್ಯವಸ್ಥಾಪಕ ನಿರ್ದೇಶಕರಾದ ಡಾ.ಎನ್ ಶಿವಶಂಕರ ಅವರು ಉಪಸ್ಥಿತರಿದ್ದರು.

Share This Article